ತಾಲೂಕು ಸುದ್ದಿ

 

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಅ.24ರಂದು ಧರ್ಮಸ್ಥಳದ ಜರುಗಿತು.

ಬೆಳಿಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.

ನಾಡಿನಾದ್ಯಂತ ಗಣ್ಯರು, ಕ್ಷೇತ್ರದ ಭಕ್ತರು, ಊರ-ಪರವೂರ ನಾಗರಿಕರು ಸೇರಿದಂತೆ ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಗೌರವವನ್ನು ಸಲ್ಲಿಸಿದರು.

ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಹೇಮಾವತಿ ವಿ ಹೆಗ್ಗಡೆ ಡಿ. ವೀರೇಂದ್ರ ಹೆಗ್ಗಡೆಯವರ ಪರಿಚಯದ ಕುರಿತಾತ ಚಿತ್ರೀಕರಣ ವೀಡಿಯೋ ಬಿಡುಗಡೆಗೊಳಿಸಿದರು. ಹಾವೇರಿ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ. ಕೆ ಚೆನ್ನಪ್ಪ ಗೌಡ ಶುಭ ಶಂಸನೆ ಗೈದರು

ಈ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿಗಳಾದ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ನೂರಿತ್ತಾಯ, ಹಣ್ಣುಕಾಯಿ ವಿಭಾಗದ ಮೇಲ್ವಿಚಾರಕ ಕೃಷ್ಣ ಕುಮಾರ್, ವಸತಿ ಛತ್ರದ ವ್ಯವಸ್ಥಾಪಕ ಶಂಕರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ನಿಮ್ಮದೊಂದು ಉತ್ತರ