ಬೆಳ್ತಂಗಡಿ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾ.27 ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ ಕಾಯ೯ಕ್ರಮ ವಿಜೃಂಭಣೆಯಿಂದ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾದ ಸುಭಾಶ್ಚಂದ್ರ ಸುರ್ಯಗುತ್ತು ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ರಾಜಶೇಖರ ಅಜಿ, ಪ್ರೋ| ಸತೀಶ್ಚಂದ್ರ ಸುರ್ಯಗುತ್ತು, ಬಿ.ಮುನಿರಾಜ ಅಜ್ರಿ ಬೊಳಿಯಂಜಿ, ಶರತ್ ಕೃಷ್ಣ ಪಡ್ವೆಟ್ನಾಯ,
ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಹಲವು ಗಣ್ಯರುಗಳು ಗ್ರಾಮಸ್ಥರು,ಊರ-ಪರವೂರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮಧ್ಯಾಹ್ನ ಗಂಟೆ 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.
ರಾತ್ರಿ ಗಂಟೆ 8.00 ರಿಂದ ಉತ್ಸವ ಹೊರಟು ನೃತ್ಯಬಲಿ ಉತ್ಸವ, ರಥಕಟ್ಟೆ ಪೂಜೆ, ಭೂತ ಬಲಿ ಶಯನೋತ್ಸವ ನಡೆಯಲಿದೆ. ರಾತ್ರಿ ಗಂಟೆ 9ರಿಂದ ನಡೆಯುವ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಕೆ. ಪ್ರತಾಪಸಿಂಹ ನಾಯಕ್ ಭಾಗವಹಿಸಲಿದ್ದಾರೆ. ರಾತ್ರಿ 10.00ರಿಂದ ಸಂಗಮ ಕಲಾವಿದರು ಉಜಿರೆ ಇವರಿಂದ ದಿನಕರ ಭಂಡಾರಿ ರಚಿಸಿ, ಗಿರೀಶ್ ಹೊಳ್ಳ ನಿರ್ದೇಶಿಸಿರುವ `ಬಾಕಿಲ್ ದೆಪ್ಪುಲೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.