ಬೆಳ್ತಂಗಡಿ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾಮಹೋತ್ಸವ ಶುಭ ಸಂದರ್ಭದಲ್ಲಿ ಮಾ.27 ರಂದು ರಾತ್ರಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ಹಾಗೂ ನಡ ಗ್ರಾಮ ಪಂಚಾಯತ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ 14 ಮಂದಿ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರುಗಿತು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಸುಭಾಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಡಗುತ್ತು ಧನಂಜಯ ಅಜ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ದೇವಸ್ಥಾನದಲ್ಲಿ 45 ವರ್ಷಕ್ಕೂ ಮಿಕ್ಕಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಅನಂತರಾಮ ಮಯ್ಯ ಹಾಗೂ ನಡ ಗ್ರಾಮ ಪಂಚಾಯತು ಅಧ್ಯಕ್ಷ ವಿಜಯ ಗೌಡ ಹಾಗೂ ಉಪಾಧ್ಯಕ್ಷೆ ವಿನುತಾ ಆರ್. ಶೆಟ್ಟಿ ಹಾಗೂ ನಡ ಮತ್ತು ಕನ್ಯಾಡಿ ಗ್ರಾಮಗಳ ಚುನಾಯಿತ 14
ಮಂದಿ ಗ್ರಾಮ ಪಂಚಾಯತು ಸದಸ್ಯರನ್ನು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ, ಆಡಳಿತ ಮೊಕ್ತೇಸರರು ಮತ್ತು ಹರೀಶ್ ಕುಮಾರ್ ಅವರು ಗೌರವಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಶೇಖರ ಅಜ್ರಿ ಉಪಸ್ಥಿತರಿದ್ದರು. ಬಿ. ಮುನಿರಾಜ ಅಜ್ರಿ ಬೊಳಿಯಂಜಿ ಅಭಿನಂದನಾ ಭಾಷಣ ಮಾಡಿದರು. ಪ್ರೋ| ಸತೀಶ್ಚಂದ್ರ ಪ್ರಾಸ್ತಾವಿಕವಗಿ ಮಾತನಾಡಿ ಸ್ವಾಗತಿಸಿದರು. ಡಾ. ಪ್ರದೀಪ್ ನಾವೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಕುಮಾರ್ ಅವರ ಎಂಎಲ್ಸಿ ನಿಧಿಯಿಂದ ನಿಮಿ೯ಸಲಾದ ಹೈ ಮಾಸ್ಟ್ ದೀಪವನ್ನು ಹರೀಶ್ ಕುಮಾರ್ ಉದ್ಘಾಟಿಸಿದರು. ರಾತ್ತಿ 10 ರಿಂದ ಸಂಗಮ ಕಲಾವಿದರು ಉಜಿರೆ ಇವರಿಂದ ದಿನಕರ ಭಂಡಾರಿ ರಚಿಸಿ, ಗಿರೀಶ್ ಹೊಳ್ಳ ನಿರ್ದೇಶಿಸಿರುವ `ಬಾಕಿಲ್ ದೆಪ್ಪುಲೆ’ ತುಳು ನಾಟಕ ಪ್ರದರ್ಶನಗೊಂಡಿತು.