ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆಂದು ಎ.1ರಂದು ಬಂದ ಭಕ್ತಿಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಸುಮಾರು 3.20 ಲಕ್ಷ ಮೌಲ್ಯದ ಚಿನ್ನವನ್ನು ಕಳ್ಳರು ಕಳವುಗೈದ ಆರೋಪಿಗಳನ್ನು
ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಳ್ಳು
ವಲ್ಲಿ ಯಶಸ್ವಿಯಾದ ಘಟನೆ ವರದಿಯಾಗಿದೆ.
ಕಳ್ಳರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು, ಆರೋಪಿಗಳು ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರು ಹಾಗೂ 85 ಗ್ರಾ, ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ವಿವರ: ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಕಲ್ಪನಾ ಚಂದ್ರಶೇಖರ ನಾಯ್ಕ ಎಂಬವರು ಎ.1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಬೆಳಗ್ಗೆ 7 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡುವರೇ ದೇವಸ್ಥಾನದ ಒಳಗೆ ಪ್ರವೇಶಿಸಿ
7-30 ಕ್ಕೆ ದೇವರ ದರ್ಶನ ಮುಗಿಸಿ ಹೊರಗಡೆ ಬಂದಾಗ ತಮ್ಮ ತಾಯಿ ಭವಾನಿಯವರು ಹಿಡಿದುಕೊಂಡಿದ್ದ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಸುಮಾರು ರೂ.3.20 ಲಕ್ಷ ಬೆಲೆಬಾಳುವ 40 ಗ್ರಾಂ ತೂಕದ ಶ್ರೀ ಗಣಪತಿ ದೇವರ ಮೂರ್ತಿ ಪೆಂಡೆಂಟ್ ಇರುವ ಚಿನ್ನದ ಸರ -1 ಮತ್ತು 40 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್-1 ಇರುವ ಸ್ಟೀಲ್ ಕರಡಿಗೆ ಇಲ್ಲದೇ ನಾಪತ್ತೆಯಾಗಿತ್ತು.ಈ ಬಗ್ಗೆ ಕಲ್ಪನಾರವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕೂಡಲೇ ಕಾರ್ಯಪ್ರವೃತ್ತರಾದ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ ಪವನ್ ನಾಯಕ್ ಮತ್ತು ಸಿಬ್ಬಂದಿಗಳಾದ ಬೆನ್ನಿಚ್ಚನ್, ಪ್ರಶಾಂತ, ರಾಹುಲ್ ರಾವ್, ರವೀಂದ್ರ ಇವರು ಆರೋಪಿಗಳ ಇರುವಿಕೆಯನ್ನು ಪತ್ತೆ ಮಾಡಿ ಗದಗ ಜಿಲ್ಲೆಯ ಸಿದ್ದಾರ್ಥ ಹಾಗೂ ದಾಕ್ಷಾಯಿಣಿ ಯವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರು, ಹಾಗೂ ಕಳವಾದ ಒಟ್ಟು 85 ಗ್ರಾಂ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿದ್ದಾರೆ. ಪೊಲೀಸ್ ರ ಕಾಯಾ೯ಚರಣೆಗೆ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.