ಕ್ರೈಂ ವಾರ್ತೆ

ಬೆಂಗಳೂರುನಲ್ಲಿ ಅಪಘಾತ: ಗೇರುಕಟ್ಪೆ ನಿವಾಸಿ ನವ ವಿವಾಹಿತೆ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನ ನೆಲಮಂಗಲದಲ್ಲಿ ಕೋಳಿ ಸಾಗಾಟದ ಲಾರಿ ಮತ್ತು ವ್ಯಾಗನರ್ ಕಾರಿನ ನಡುವೆ ಅಪಘಾತ ಸಂಭವಿಸಿ ಗೇರುಕಟ್ಟೆಯ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿ ದಂಪತಿ ಪುತ್ರಿ, ನವ ವಿವಾಹಿತೆ ಧನುಷಾ ರವರು ದಾರುಣವಾಗಿ ಮೃತಪಟ್ಟ ಘಟನೆ ಎ.3ರಂದು ನಡೆದಿದೆ.

ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೇರುಕಟ್ಟೆ ಸಮೀಪದ ಕಳಿಯ ಗ್ರಾಮದ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿ ದಂಪತಿ ಪುತ್ರಿ ಧನುಷಾ ರವರ ವಿವಾಹವು ಪುತ್ತೂರು ತಾಲೂಕಿನ ದಾರಂದಕುಕ್ಕು ನಿವಾಸಿ ಸವಿತಾ ಮತ್ತು ಉದಯ ಕುಮಾರ್ ನಾಯಕ್ ದಂಪತಿ ಪುತ್ರ ಗೋಪಿಕ್ ರವರೊಂದಿಗೆ ಫೆ.21ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದಿತ್ತು.ವಿವಾಹದ ಬಳಿಕ ದಾರಂದಕುಕ್ಕು ಮನೆಯಲ್ಲಿದ್ದ ನವದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಅವರ ಜೊತೆ ಬೆಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಇಂದು(ಎ.3) ಮುಂಜಾನೆ ಮಾರುತಿ ವ್ಯಾಗನರ್ ಕಾರಿನಲ್ಲಿ ಹೊರಟ್ಟಿದ್ದರು. ಬೆಂಗಳೂರು ನೆಲಮಂಗಲಕ್ಕೆ ತಲುಪುತ್ತಿದ್ದಂತೆ ಇವರ ಕಾರುಮತ್ತು ಕೋಳಿ ಸಾಗಾಟದ ಲಾರಿ ಪರಸ್ಪರ ಡಿಕ್ಕಿಯಾಗಿದ್ದು,
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ
ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಧನುಷಾ ಸ್ಥಳದಲ್ಲೇ ಮೃತಪಟ್ಟಿದ್ದರು. ಉಳಿದಂತೆ ಗೋಪಿಕ್ ಮತ್ತು ಸಂಬಂಧಿಕರು ತೀವ್ರಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ.

ನಿಮ್ಮದೊಂದು ಉತ್ತರ