ಗುರುವಾಯನಕೆರೆ: ಗುರುವಾಯನಕೆರೆಯ ಶಾರದಾ ನಗರ ಎಂಬಲ್ಲಿ ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಎ.13 ರಂದು ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಎ.14 ರಂದು ಮೃತಪಟ್ಟಿದ್ದಾರೆ.
ಗುರುವಾಯನಕೆರೆಯ ನಿವಾಸಿ ವಿನೋದ್ ನಾಯಕ್ ರವರ ಧರ್ಮಪತ್ನಿ ಮಂಜುಳಾ ವಿ ನಾಯಕ್ ಯಾನೆ ವಿಜಯಲಕ್ಷ್ಮೀ ನಾಯಕ್ ರವರು ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ.
ಘಟನೆಯ ವಿವರ: ಎ.13 ರಂದು ರಾತ್ರಿ ಸುಮಾರು 8.00 ಗಂಟೆಯ ಸಮಯದಲ್ಲಿ ಮಂಜುಳಾ ವಿ ನಾಯಕ್ ರವರು ಗುರುವಾಯನಕೆರೆಯ ಶಾರದಾನಗರ ಎಂಬಲ್ಲಿ ರಸ್ತೆ ದಾಟುತ್ತಿರುವ ಸಂದರ್ಭ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಎ.14 ರಂದು ಸಂಜೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.