ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಸೀಟು ಬಳಿ ಪಿಕಾಫ್ ಮತ್ತು ಬೈಕ್ ನಡುವೆ ಸಂಭವಿಸಿದ ಘಟನೆ ಎ.16 ರಂದು ವರದಿಯಾಗಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ತೋಟತ್ತಾಡಿ ಗ್ರಾಮದ ಕುತ್ರಿಜಾಲ್ ನಿವಾಸಿ ಶೇಖರ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .
ಸಹಸವಾರ ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಸುಂದರ ಪೂಜಾರಿಯವರ ಪುತ್ರ ಪ್ರಶಾಂತ್ ಪೂಜಾರಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ
ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇದೀಗ ಕೊನೆಯುಸಿರೆಳೆದಿದ್ದಾರೆ. ಎಂದು ತಿಳಿದುಬಂದಿದೆ.ಬೆಳ್ತಂಗಡಿ ಸಂಂಚಾಾರಿ ಪೊಲೀಸ್ ತನಿಖೆ ನಡೆಸುತ್ತಿದ್ದಾರೆ