ಕ್ರೈಂ ವಾರ್ತೆ

ಶಿರಸಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತೋಟತ್ತಾಡಿಯ ಯುವಕನ ಬಬ೯ರ ಹತ್ಯೆ

ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಸುದರ್ಶನ್ (36.ವ) ಎಂಬವರನ್ನು ಶಿರಸಿ ಮೂಲದ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಬರ್ಬರವಾಗಿ ಹತ್ಯೆಗೈದ ಘಟನೆ ಎ.29 ರಂದು ನಡೆದಿದೆ.

ಘಟನೆಯ ವಿವರ: ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ರಿಯಲ್ ಎಸ್ಟೇಟ್ ಹಾಗೂ ಫೈವುಡ್ ವ್ಯವಹಾರ ನಡೆಸುತ್ತಿದ್ದ ಪುರುಷೋತ್ತಮನ್ ರವರ ಪುತ್ರ ಸುದರ್ಶನ್ ರವರು ಶಿರಸಿಯ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ತಮ್ಮ ಬೈಕಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಯುವಕನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಯಾವ ಕಾರಣಕ್ಕಾಗಿ ಯುವಕನ ಹತ್ಯೆ ಮಾಡಲಾಗಿದೆ. ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.

ನಿಮ್ಮದೊಂದು ಉತ್ತರ