ಬೆಳ್ತಂಗಡಿ: ಮಡಿಕೇರಿಯಿಂದ ಮಗುವಿನೊಂದಿಗೆ ನಾಪತ್ತೆಯಾದ ಮಹಿಳೆ ಧಮ೯ಸ್ಥಳದಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಮಹಿಳೆಯು ತನ್ನ ಅತ್ತೆಯ ಕಿರುಕುಳದಿಂದ ಬೇಸತ್ತು, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ತನ್ನ ಎರಡು ವರ್ಷದ ಮಗುವಿನ ಜೊತೆ ಮನೆಯಿಂದ ಹೊರ ಹೋಗಿದ್ದಾಳೆ. ಆದರೆ, ಧರ್ಮಸ್ಥಳ ಪೊಲೀಸರ ಸಮಯದಿಂದ ತಾಯಿ ಹಾಗೂ ಮಗು ಈಗ ಬದುಕಿ ಉಳಿದಿದ್ದಾರೆ.
ಮಡಿಕೇರಿ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೋನಿಯ ದಿನೇಶ್ ಎಂಬುವವರ ಪತ್ನಿ ಸೌಮ್ಯ ಮನೆಯಲ್ಲಿ ಅತ್ತೆಯ ಕಿರುಕುಳದಿಂದ ನೊಂದಿದ್ದರು. ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ದೃಢ ನಿರ್ಧಾರ ಮಾಡಿ, ಜೂನ್ 14 ರಂದು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಮಗುವಿನ ಜೊತೆ ಮನೆ ಬಿಟ್ಟಿದ್ದ ಸೌಮ್ಯ ಸಂಜೆಯಾದರೂ ಮನೆಗೆ ಹಿಂತಿರುಗಿ ಬಂದಿರಲಿಲ್ಲ. ಅನುಮಾನ ಬಂದ ಕುಟುಂಬಸ್ಥರು ಮಹಿಳೆಯ ಪತ್ತೆಗಾಗಿ ಶುಂಠಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ಕುಟುಂಬಸ್ಥರು ಮಹಿಳೆ ಧರ್ಮಸ್ಥಳದ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಬಹುದೆಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಮಡಿಕೇರಿಯಿಂದ ಬರುವ ಬಸ್ಸುಗಳನ್ನು ಹುಡುಕಲಾಗಿದೆ. ಈ ವೇಳೆ ಮಡಿಕೇರಿಯಿಂದ ಧರ್ಮಸ್ಥಳಕ್ಕೆ ಬರುವ ಬಸ್ ನಲ್ಲಿ ಮಗುವಿನ ಜೊತೆ ಸೌಮ್ಯ ಇದ್ದಿದ್ದರು.