ಬೆಳ್ತಂಗಡಿ : ಜಾರಿಗೆಬೈಲಿನಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಂಟ್ವಾಳದ ಅಂಚಿ ಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು ೬ ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ತಲೆಕೆಳಗಾಗಿ ಕಾರು ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ೬ ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.