ಕ್ರೈಂ ವಾರ್ತೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಮತ್ತೆ ಎನ್.ಐ.ಎ ಅಧಿಕಾರಿಗಳ ದಾಳಿ : ಮೂವರ ಬಂಧನ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ.

ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
,ಬೆಳ್ಳಾರೆಯಲ್ಲಿ ಎಸ್ ಡಿಪಿಐ ಕಾರ್ಯದರ್ಶಿ ಬಂಧನ: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಎನ್‌ಐಎ ಇಂದು ಬೆಳ್ಳಂಬೆಳಗ್ಗೆ ಬೆಳ್ಳಾರೆಯಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್  ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬಂಧಿಸಿ, ವಿಚಾರಣೆ ಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ದ್ದಾರೆ.

.

ನಿಮ್ಮದೊಂದು ಉತ್ತರ