ಚಾರ್ಮಾಡಿ ಘಾಟಿಯ ತಿರುವಿನಲ್ಲಿಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ವರು ಪ್ರಯಾಣಿ ಕರು ಅಪಾಯದಿಂದ ಪಾರಾದ ಘಟನೆ ನ.24ರಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಮೂಡಿಗೆರೆಗೆ ಕಡೆ ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಾ 1ನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಣಕಲ್ ಕಡೆಯ ಆಟೋವಾಗಿದ್ದು
ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಈ ನಡೆದಿದೆ.
ವಾಹನಗಳು ಮುಖಾಮುಖಿ ಡಿಕ್ಕಿ ಯಾದ್ದರಿಂದ ಎರಡು ವಾಹನಗಳು ಜಖಂ ಗೊಂಡಿದೆ.