ಜಿಲ್ಲಾ ವಾರ್ತೆ

ಉಡುಪಿ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಿರಾಜ ಆರಿಗಾ ನೇಮಕ

ಬೆಳ್ತಂಗಡಿ: ಪ್ರಧಾನ ಮಂತ್ರಿಗಳ ಹೊಸ 15ಅಂಶಗಳ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಗಾಗಿ ರಚಿಸಲಾದ ಉಡುಪಿ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿಯ ನಾಮನಿದೇಶಿತ ಸದಸ್ಯರಾಗಿ ನೇಮಿರಾಜ ಆರಿಗ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿಯವರು ನೀಡಿದ ಪ್ರಸ್ತಾವನೆಯಂತೆ ಸ್ಥಾಯಿ ಸಮಿತಿಗೆ ಸರಕಾರ ನಾಮನಿರ್ದೇಶನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ.
ನಡ ಗ್ರಾಮದ ಒಳಬೈಲು ನಿವಾಸಿ ಪ್ರಗತಿಪರ ಕೃಷಿಕರಾಗಿರುವ ನೇಮಿರಾಜ ಆರಿಗ ಅವರು ಕರ್ನಾಟಕ ರಾಜ್ಯ ಜೈನ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿ, ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಕಾರ್ಕಳ ಇದರ ಅಧ್ಯಕ್ಷರಾಗಿ, ಬೆಳ್ತಂಗಡಿ ಸರ್ವೋದಯ ಟ್ರಸ್ಟ್‌ನ ನಾವೂರು ಇದರ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ನಿರ್ದೇಶಕರಾಗಿ, ಕರ್ನಾಟಕ ಜೈನ್ ಮಹಿಳಾ ಸ್ವಸಹಾಯ ಸಂಘಗಳ ಅಧ್ಯಕ್ಷರಾಗಿ, ಸಾರತ್ಯ ಸೇವಾ ಸಂಘ ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ, ವೇಣೂರು ಮತ್ತು ಧರ್ಮಸ್ಥಳದಲ್ಲಿ ನಡೆದ ಮಹಾಮಸ್ತಕಾಭಿಷೇಕದಲ್ಲಿ ಸ್ವಯಂ ಸೇವಕರ ಸಂಘದ ಸಂಚಾಲಕರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷರಾಗಿ, ದ.ಕ ಜಿಲ್ಲಾ ಯುವಜನ ಸಂಘ ಕಾರ್ಕಳದ ಮಾಜಿ ಅಧ್ಯಕ್ಷರಾಗಿ, ಬೆಳ್ತಂಗಡಿ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ, ರತ್ನಾತ್ರಯ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನಿಮ್ಮದೊಂದು ಉತ್ತರ