ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಕೋವಿಡ್ 19 ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸ್ತುತ ನಡೆಯುತ್ತಿರುವ ಎಲ್ಲ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ | ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೊರಡಿಸಲಾಗಿದೆ.