ಜಿಲ್ಲಾ ವಾರ್ತೆ

ಬಂಟ್ವಾಳದ ಹಿರಿಯ ಪತ್ರಕರ್ತ, ಸಂಘಟಕ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಮುಂಗಾರು,ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕವಿವಿಧಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧು
ವಾಗಿದ್ದಹಿರಿಯಸ್ವಾತಂತ್ರ್ಯಹೋರಾಟಗಾರರಾಗಿದ್ದದಿವಂಗತಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ ಸೇರಿದಂತೆ ಒಟ್ಟು 4ಕೃತಿಗಳನ್ನುಬರೆದಿದ್ದರು. ಲೇಖರಲ್ಲದೆ ಉತ್ತಮ ಭಾಷಣಕಾರರುಆಗಿದ್ದರು.ಉಜಿರೆಯಲ್ಲಿ ನಡೆದ ವಿಶ್ವ ತುಳು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರೀ
ಯವಾಗಿತೊಡಗಿಸಿಕೊಂಡಿದ್ದ  ಅವರನ್ನು ಡಾ.ಹೆಗ್ಗಡೆಯವರು ಪುರಸ್ಕರಿಸಿದ್ದಲ್ಲದೆ ಹಲವಾರು ಸನ್ಮಾನಕ್ಕೂ ಪಾತ್ರರಾಗಿದ್ದರು. ಇತ್ತೀಚೆಗಷ್ಟೆ ಕರ್ನಾಟಕ ತುಳು ಸಾಹಿ
ತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸ
ದಲ್ಲಿಯೇ “ಚಾವಡಿ ಪುರಸ್ಕಾರ” ನೀಡಿ ಗೌರವಿಸಲಾಗಿತ್ತು.
ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘದಲ್ಲಿಯು ಸಕ್ರೀಯ ಸದಸ್ಯ, ಪದಾಧಿಕಾರಿಯಾಗಿಯು ಕಾರ್ಯನಿರ್ವಹಿಸಿದ್ದು, ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲೂ ಸಕ್ರೀಯವಾಗಿದ್ದರು. ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರಲ್ಲದೆ, ಕಾಂಗ್ರೆಸ್ ಪಕ್ಷದಲ್ಲೂ ಕಾರ್ಯಕರ್ತರಾಗಿ ಕೆಲ ಸಮಯಗಳ ಕಾಲ ಗುರುತಿಸಿದ್ದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರಿ, ಪುತ್ರ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಡಿ.ಎಂ.ಕುಲಾಲ್ ಅವರ ನಿಧನಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪಾಡಿ, ಮಾಜಿ ಸಚಿವ ರಮಾನಾಥ ರೈ ಸಂತಾಪ ವ್ಯಕ್ತಪಡಿಸಿದ್ದಾರೆ.

ನಿಮ್ಮದೊಂದು ಉತ್ತರ