ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ‘ಗೃಹ ಸಚಿವರು ಸಮಗ್ರ ತನಿಖೆ ಮಾಡಿ ಕ್ರಮ ಗೊಳ್ಳುವ ಭರವಸೆ ನೀಡಿದ್ದು, ಸರಕಾರದ ವತಿಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ.
‘ಬೆಂಗಳೂರಿನಿಂದ ರಾತ್ರಿ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿಶಾಸಕರು ಇದ್ದ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ
ಮಾಡಲಾಗಿದೆ. ಗೃಹ ಸಚಿವರು ಬೆಳಗ್ಗೆ 2 ಬಾರಿ ಕರೆ ಮಾಡಿದ್ದು, ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ಶಾಸಕರಿಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ. ಅದರಂತೆ ಈಗ ಶಾಸಕರಿಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಲಾಗಿದೆ.