ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ, ಲಾಲ ಗ್ರಾಮದ ನಿನ್ನಿಕಲ್ಲು ಎಂಬಲ್ಲಿಯ ನಿವಾಸಿ ಬಾಬು ಎಲ್. ಅವರ ಪುತ್ರ ಅಶೋಕ್(೪೪ವ) ಅವರು ಅನಾರೋಗ್ಯದಿಂದ ಬಳಲಿ ಮೇ 10ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ಸಂಘದ ನಡ ಶಾಖೆಯಲ್ಲಿಯೂ ಪಡಿತರ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ ಒಂದುವರೆ ತಿಂಗಳುಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಅವಿವಾಹಿತರಾಗಿದ್ದ ಇವರು ಸಹೋದರರು, ಸಹೋದರಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಕೆ. ಆಡಳಿತ ಮಂಡಳಿಯ ನಿರ್ದೇಶಕರುಗಳು, ಊರಿನ ನಾಗರಿಕರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಮೇ 11ರಂದು ಬೆಳಗ್ಗೆ ಶವದ ಅಂತ್ಯಸಂಸ್ಕಾರವನ್ನು ನಡೆಸಲಾಯಿತು. ಮೃತರ ಗೌರವಾರ್ಥ ಬೆಳ್ತಂಗಡಿ ಸಹಕಾರಿ ಸಂಘ ಹಾಗೂ ಎಲ್ಲಾ ಶಾಖೆಗಳಿಗಳಿಗೆ ರಜೆ ಘೋಷಿಸಲಾಯಿತು.