ನಿಧನ ಸುದ್ದಿ

ಉದ್ಯಮಿ ಅಳದಂಗಡಿಯ ಉದಯ ದೇವಾಡಿಗ ಕೊರೋನಾಗೆ ಬಲಿ

ಅಳದಂಗಡಿ: ಇಲ್ಲಿನ ನಡಾಯಿ ನಿವಾಸಿ ದಿ| ಸುಂದರ ದೇವಾಡಿಗ ರವರ ಪುತ್ರ, ಉದ್ಯಮಿ ಉದಯ ದೇವಾಡಿಗ(50.ವ)ರವರು ಕೊರೊನಾ ಸಾಂಕ್ರಾಮಿಕ ರೋಗದಂದ ಬಳಲಿ ಮೇ.26ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕೊರೊನಾ ಸೊಂಕು ದೃಢಪಟ್ಟಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಮೇ.26 ರಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಉದಯ ದೇವಾಡಿಗ ರವರ ತಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಂದರ ದೇವಾಡಿಗರವರು ಇತ್ತೀಚೆಗೆ ನಿಧನರಾಗಿದ್ದು, ಒಂದೇ ತಿಂಗಳಲ್ಲಿ ಮನೆಯ ಇಬ್ಬರು ಸದಸ್ಯರನ್ನು ಕಳೆದುಕೊಂಡಿರುವ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರು ಪತ್ನಿ, ಓರ್ವ ಪುತ್ರ, ಸಹೋದರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ನಿಮ್ಮದೊಂದು ಉತ್ತರ