ಅಳದಂಗಡಿಯ ಜೀರ್ಣೋದ್ಧಾರಗೊಳ್ಳುತ್ತಿರುವ 1008 ಆದಿನಾಥ ಸ್ವಾಮಿ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಸದಿಯ ಭಕ್ತರ ಕೋರಿಕೆಯ ಮೇರೆಗೆ ರೂ.2, 50, 000 ದ ದೇಣಿಗೆ ನೀಡಿದ್ದಾರೆ.
ದೇಣಿಗೆಯ ಡಿ. ಡಿ. ಹಸ್ತಾಂತರದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ , ತಾಲ್ಲೂಕು ಯೋಜನಾಧಿಕಾರಿ ಯಶವಂತ್ ಎಸ್. ತಾಲ್ಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಜನಜಾಗೃತಿ ವಲಯಾಧ್ಯಕ್ಷರಾದ ಪ್ರಮೋದ್ ಜೈನ್, ವಲಯ ಮೇಲ್ವೀಚಾರಕಿ ಮಲ್ಲಿಕಾ, ಸೇವಾಪ್ರತಿನಿಧಿ ಹೇಮಲತಾ ಹಾಗೂ ಆದಿನಾಥ ಬಸದಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧನಂಜಯ್ ಜೈನ್, ಕಾರ್ಯಾಧ್ಯಕ್ಷ ಚಿತ್ತರಂಜನ್ ಹೆಗ್ಡೆ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.