ಬೆಳ್ತಂಗಡಿ : ಕೇಂದ್ರ ಸರಕಾರ ಕೋವಿಡ್ -19ರ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಮೇಲ್ಪಟ್ಟ ಎಲ್ಲರಿಗೂ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಲು ಮುಕ್ತ ಅವಕಾಶ ಪ್ರಕಟಿಸಿದೆ. ಸರಕಾರಗಳಿಂದ ಕೋವಿಡ್ ನಿಯಂತ್ರಣಕ್ಕೆ ಇದು ಅತ್ಯಂತ ಮಹತ್ವದ ನಡಯಾಗಿದೆ.
ಈ ನಡೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕು ಬಿಜೆಪಿ ಯುವಮೋರ್ಚಾ ಲಸಿಕೆ ಹಾಕಿಸಿಕೊಳ್ಳುವ ಮೊದಲು ಅರ್ಹ ದಾನಿಗಳು ‘ರಕ್ತದಾನ ಮಾಡಿ’ ವಿನೂತನ ಜಾಗೃತಿ ಅಭಿಯಾನವನ್ನು ಎಂಬ ಆರಂಭಿಸಿದ್ದು, ತುರ್ತು ಸಂದರ್ಭದಲ್ಲಿ ತಾಲೂಕಿನ ಜನರಿಗೆ ನೆರವಾಗುವ ಉದ್ದೇಶದಿಂದ ಯೋಜನೆಯನ್ನು ಕೈಗೊಳ್ಳಲಾಗಿದೆ.
ಈ ಕುರಿತು ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಯಶವಂತ್ ಗೌಡ ಮಾಹಿತಿ ಹಂಚಿಕೊಡಿದ್ದಾರೆ. ಕೋವಿಡ್ ನಿರೋಧಕ ಲಸಿಕೆ ಅಭಿಯಾನವು ಮೇ 1ರಿಂದ 18ರಿಂದ 45 ವರ್ಷದವರಿಗಾಗಿ ಆರಂಭವಾಗುತ್ತದೆ. ರಾಷ್ಟ್ರೀಯ ರಕ್ತ ಸಂಚರಣ ಪರಿಷತ್ (ಎಬಿಟಿಸಿ) ಪ್ರಕಾರ ಯಾವುದೇ ಲಸಿಕೆ ಪಡೆದ ನಾಲ್ಕು ವಾರಗಳ ತನಕ ರಕ್ತದಾನ ಮಾಡಲು ಅವಕಾಶ ಇಲ್ಲ.ಕೋವಿಡ್ ಲಸಿಕೆ ಎರಡು ಹಂತದಲ್ಲಿ ಪಡೆಯಬೇಕಾಗಿದ್ದು, ಸುಮಾರು 56 ದಿನಗಳ ಕಾಲ ರಕ್ತ ದಾನ ಮಾಡುವುದು ಅಸಾಧ್ಯ. ಈ ಹಂತದಲ್ಲಿ ದೇಶದಲ್ಲಿ ರಕ್ತದ ಕೊರತೆ ಆಗುವ ಸಾಧ್ಯತೆ ದಟ್ಟವಾಗಿದ್ದು ಕೊರೊನಾ ಭಯದದಲ್ಲಿ ಮೊದಲೇ ರಕ್ತದಾನಿಗಳ ಕೊರತೆ ಇದೆ. ಹಾಗಾಗಿ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಸಮಸ್ಯೆಗೆ ಪರಿಹಾರವಾಗಿ ಈ ಅಭಿಯಾನವನ್ನು ತಾಲೂಕಿನೆಲ್ಲೆಡೆ ನಡೆಸುತ್ತಿದ್ದು, ದಾನಿಗಳನ್ನು ವೇಗವಾಗಿ ಸಂಪರ್ಕಿಸಲು ಆ್ಯಪ್ ಅನ್ನು ಸಿದ್ಧಪಡಿಸಿದ್ದೇವೆ. ಯಾವುದೇ ಗುಂಪಿನ ರಕ್ತವನ್ನು ದಾನ ಮಾಡಬಹುದಾಗಿದ್ದು, ರಕ್ತ ದಾನ ಮಾಡಲು ಇಚ್ಛಿಸುವವರು ನಾವು ಬರುವಂತಿರಬೇಕು. ಕರೆದ ಕೂಡಲೇ
ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ಈ ಲಿಂಕ್ ಮೂಲಕ https://docs.google.com/forms/d/e/1FAIpQLSeRyHKI vc=0&c=0&w=1&fir=0
ನೋಂದಾವಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.