ಬೆಳ್ತಂಗಡಿ: ರಾಜ್ಯ ಸರಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರನ್ನು
ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಶಾಲು ಹೊದಿಸಿ ಗೌರವಿಸಿದರು
ರಾಜ್ಯದ ನೂತನ ಮುಖ್ಯಮಂತ್ರಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿ ಇದ್ದರು.