ಬೆಂಗಳೂರು: ಜೆಡಿಎಸ್ ಪ್ರಮುಖ ನಾಯಕ ಹಾಗೂ ವಿಧಾನಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ ಮೇ. 3ರಂದು ಅಧಿಕೃತ ವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ವಿವಿಧ ಕಾರ್ಯಕ್ರಮಗಳ ನಿಮಿತ್ತ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಈ ವೇಳೆಯಲ್ಲಿಯೇ ಕೇಂದ್ರ ಸಚಿವರ ಸಮ್ಮುಖದಲ್ಲಿ ಹೊರಟ್ಟಿಯವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಅವರಿಗೆ ಅಮಿತ್ ಶಾ ಹೂ ಗುಚ್ಚ ನೀಡುವ ಮೂಲಕ, ಪಕ್ಷಕ್ಕೆ ಸ್ವಾಗತಿಸಿದರು.