ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಮಾದರಿ ಸರ್ವಜ್ಞ ಪ್ರತಿಮೆ ಹಾಗೂ ವೃತ್ತ ಸ್ಥಾಪನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕು ಕುಲಾಲ-ಕುಂಬಾರ ಸಮುದಾಯದ ಭವನ ನಿರ್ಮಾಣಕ್ಕೆ ಈಗಾಗಲೇ ರೂ. 1.75 ಕೋಟಿ ಅನುದಾನ ಒದಗಿಸಿದ್ದೇನೆ. ಇದರಲ್ಲಿ ರೂ. 25 ಲಕ್ಷ ಈಗಾಗಲೇ ಮಂಜೂರುಗೊಂಡಿದೆ. ತಾಲೂಕಿನ ಕುಲಾಲ ಕುಂಬಾರ ಸಮುದಾಯ ನನ್ನ ಕುಟುಂಬ ಸದಸ್ಯರಂತಿದ್ದು, ತಾಲೂಕು ಕೇಂದ್ರ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಮಾದರಿ ಸರ್ವಜ್ಞ ಪ್ರತಿಮೆ ಜೊತೆ ವೃತ್ತ ನಿರ್ಮಿಸಲು ಯೋಜನೆ ಮಾಡುತ್ತೇನೆ ಎಂದು ಶಾಸಕರಾದ ಹರೀಶ್ ಪೂಂಜ ಹೇಳಿದರು.

ಅವರು ತಾಲೂಕು ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಹಾಗೂ ಕುಲಾಲ ಕುಂಬಾರರ ಯುವವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳ್ತಂಗಡಿ ಮಿನಿ ವಿಧಾನ ಸೌದದ ಸಭಾಂಗಣದಲ್ಲಿ ಜರಗಿದ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತ್ರಿಪದಿಗಳ ಮೂಲಕ ಸಮಾಜದ ಪರಿವರ್ತನೆ ಜತೆ ತಾರತಮ್ಯತೆಯನ್ನು ಹೋಗಲಾಡಿಸಿದವರು ಸರ್ವಜ್ಞರು. ಮನುಕುಲಕ್ಕೆ ಹೊಸ ಸಂದೇಶ ಸಾರಿದ ಸರ್ವಜ್ಞ ವಿಶ್ವಮಾನ್ಯರು ಎಂದರು
ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಬಿಎಸ್‌ವೈ ಅವರ ಅವಧಿಯಲ್ಲಿ ಸರ್ವಜ್ಞ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲು ಅವಕಾಶ ಮಾಡಿಕೊಟ್ಟಿದ್ದು, ಈ ಬಹುದೊಡ್ಡ ಗೌರವವನ್ನು ಸಮುದಾಯ ಮರೆಯುವಂತಿಲ್ಲ. ಇನ್ನೊಂದು ಬಹುದೊಡ್ಡ ಬೇಡಿಕೆ ಸರಕಾರದ ಮುಂದಿದ್ದು, ಸ್ವತಂತ್ರ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಸರಕಾರ ಮನಸ್ಸು ಮಾಡಬೇಕು, ಮಾನ್ಯ ಶಾಸಕರು ಮುಖ್ಯಮಂತ್ರಿಯವರಿಗೆ ಒತ್ತಡ ಹಾಕಬೇಕೆಂದು ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅವರು ತಾಲೂಕು ವ್ಯಾಪ್ತಿಯಲ್ಲಿ ಸವ೯ಜ್ಞ ವೃತ್ತ ನಿಮಾ೯ಣ ಮಾಡುವಂತೆ ಸಂಘದ ಬೇಡಿಕೆ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.
ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ, ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್ ಮಾತನಾಡಿ, ಕವಿ ಸವ೯ಜ್ಞರ ಜೀವನ‌‌ ಮತ್ತು ಅವರ ತ್ರಿಪದಿ ಸಾಹಿತ್ಯದ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಎ.,ಪಟ್ಟಣ ಪಂಚಾಯತು ಮುಖ್ಯಾಧಿಕಾರಿ ರಾಜೇಶ್, ಉಪ ತಹಶೀಲ್ದಾರ್ ರವಿಕುಮಾರ್, ಕುಲಾಲ ಕುಂಬಾರರ ಯುವವೇದಿಕೆಯ ಅಧ್ಯಕ್ಷ ಉಮೇಶ್ ಕುಲಾಲ್, ಪ್ರಮುಖರಾದ ಲೋಕೇಶ್ ಕುಲಾಲ್ ಸಿಟಿ ಎಲೆಕ್ಟ್ರಾನಿಕ್ಸ್ ಗುರುವಾಯನಕೆರೆ, ರಾಜಿವ್ ಬಿ.ಎಚ್., ಕೃಷ್ಣಪ್ಪ ಕಾಸಿಬೆಟ್ಟು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೊನ್ನಯ್ಯ ಕಾಟಿಪಳ್ಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಿ.ಎಸ್. ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಕಚೇರಿ ಸಿಬ್ಬಂದಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ನಿಮ್ಮದೊಂದು ಉತ್ತರ