ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧಮಾ೯ಧಿಕಾರಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾಗ೯ದಶ೯ನದಲ್ಲಿ ನಡೆಯುತ್ತಿರುವ ಶ್ರೀ ಧಮ೯ಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆಯಲ್ಲಿ ಸುಮಾರು ರೂ. 1.50 ಕೋಟಿ ವೆಚ್ಚದಲ್ಲಿ ನೂತನವಾಗಿ ಆಳವಡಿಸಲಾದ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರವ 32 ಸ್ಲೈಸ್ ಸಿ.ಟಿ ಸ್ಕ್ಯಾನ್ ಉಪಕರಣವನ್ನು ಅ.29ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ ಲೋಕಾಪ೯ಣೆಗೈದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಧಮ೯ಸ್ಥಳ ಎಸ್.ಕೆ.ಡಿ.ಆರ್.ಡಿ.ಪಿಯ ಕಾರ್ಯನಿರ್ವಹಕ ನಿರ್ದೇಶಕರಾದ ಡಾ| ಎಲ್.ಹೆಚ್ ಮಂಜುನಾಥ್ ಭಾಗವಹಿಸಿದ್ದರು.
ಶ್ರೀ ಧ.ಮಂ.ಮೆಡಿಕಲ್ ಟ್ರಸ್ಟ್ ಕಾಯ೯ದಶಿ೯ ಶಿಶುಪಾಲ ಪೂವಣಿ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ಆಸ್ಪತ್ರೆಯ ವೈದ್ಯರುಗಳು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಶ್ರೀ ಧ.ಮಂ.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಾಶೀನಾಥ್ ಶೆಣೈ ವಂದಿಸಿದರು.