ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆಸಾಧಕರು

ನ.25: ಡಾ.ಹೆಗ್ಗಡೆಯವರ 73ನೇ ಹುಟ್ಟು ಹಬ್ಬ

ನ.೨೫ : ಡಾ| ಹೆಗ್ಗಡೆಯವರ
೭೩ ವರ್ಷದ ಹುಟ್ಟು ಹಬ್ಬ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ೭೩ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ- ಸಡಗರದಿಂದ ನ.೨೫ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಲಿದೆ.
ನಾಡಿನಾದ್ಯಂತ ಗಣ್ಯರು, ಧರ್ಮಸ್ಥಳ ಪೇಟೆಯ ವರ್ತಕರು ಸೇರಿದಂತೆ ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯಗಳನ್ನು, ಗೌರವನ್ನು ಸಲ್ಲಿಸಲಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಚರ್ತುವಿಧ ದಾನ ಪರಂಪರೆಯನ್ನು ಮುಂದುವರಿಸಿಕೊಂಡು ಕಾಲದ ಅಗತ್ಯತೆಗೆ ಅನುಗುಣವಾಗಿ ಈ ಪರಂಪರೆಗೆ ಹೊಸ ದಿಕ್ಕನ್ನು ನೀಡಿದವರು ಡಾ. ಹೆಗ್ಗಡೆಯವರು. ಶ್ರೀ ಕ್ಷೇ. ಧ. ಗ್ರಾ. ಯೋಜನೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಜನಜಾಗೃತಿ ವೇದಿಕೆ ಕಾರ್ಯಕ್ರಮಗಳು, ಆರೋಗ್ಯ ಸುರಕ್ಷಾ ಮತ್ತು ನೈರ್ಮಲ್ಯ ಯೋಜನೆಗಳು, ಜ್ಞಾನತಾಣ ಕಾರ್ಯಕ್ರಮ, ಪರಿಸರ ಸಂಬಂಧಿತ ಕಾರ್ಯಕ್ರಮಗಳು, ಪ್ರಗತಿ ಬಂಧು, ಸ್ವಸಹಾಯ ಸಂಘಗಳು, ರುಡ್‌ಸೆಟ್, ಭಜನಾ ತರಬೇತಿ ಕಮ್ಮಟ, ಯಕ್ಷಗಾನ ಇಂದು ರಾಜ್ಯದಾದ್ಯಂತ ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾದರಿ ಕ್ಷೇತ್ರವಾಗಿ ಜನಮನ್ನಣೆಗೆ ಪಾತ್ರರಾಗಿದೆ.

 

ನಿಮ್ಮದೊಂದು ಉತ್ತರ