ಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಕಸ್ತೂರಿ ರಂಗನ್ ವರದಿ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ಕೈ ಬಿಡುವಂತೆ ಒತ್ತಾಯಿಸಿ  ಪ್ರತಿಭಟನೆ


ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ೧೭ ಗ್ರಾಮಗಳು ಸೇರಿಸ್ಪಟ್ಟ ಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ ಎಂದು ಗುರುತಿಸ್ಪಟ್ಟ ಕಸ್ತೂರಿರಂಗನ್ ವರದಿಯನ್ನು ಕೈ ಬಿಡುವಂತೆ ಒತ್ತಾಯಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸಂತ್ರಸ್ತರು ಡಿ.೪ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಅವರು ಮಾತನಾಡಿ, ತಲೆತಲಾಂತರದಿಂದ ತಮ್ಮ ಜೀವನಾಡಿಯಾದ ಕೃಷಿಯನ್ನು ತಮ್ಮ ಕುಲ ಕಸುಬಾಗಿ ಮಾಡಿಕೊಂಡು ಜೀವನ ನಡೆಸುತ್ತಿರುವ ಕೃಷಿಕರು ಈ ಯೋಜನೆ ಜಾರಿಯಾದರೆ ಅತಂತ್ರಗೊಂಡು ನಿರ್ಗತಿಕರಾಗುವ ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಈಗಾಗಲೇ ಪಂಚಾಯತು ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಲಾಗಿದೆ. ಗ್ರಾಮ ಸಭೆಗಳಲ್ಲೂ ಜನರ ಅಭಿಪ್ರಾಯವನ್ನು ನಿರ್ಣಯಿಸಿ ಸರಕಾರಕ್ಕೆ ನೀಡಲಾಗಿದೆ. ಆದರೂ ಇದಗೀ ವರದಿ ಜಾರಿಗೆ ಅಂತಿಮ ಗಡುವು ನೀಡಿರುವುದು ಕೃಷಿಕರಲ್ಲಿ ಭೀತಿಯನ್ನು ಉಂಟು ಮಾಡಿದೆ ಕೂಡಲೇ ಈ ವರದಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೆಲ್ಯಾಡಿ ಚರ್ಚ್ ಧರ್ಮಗುರು ಫಾ| ಆದರ್ಶ,  ಸೆಭಾಸ್ಟಿನ್ ಕಳೆಂಂಜ, ನಿತ್ಯಾನಂದ ಶೆಟ್ಟಿ, ಜನಹಿತ ವೇದಿಕೆ ತಾಲೂಕು ಸಂಚಾಲಕ ಸಂತೋಷ್ ಕುಮಾರ್ ಪುದುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ