ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಬೆಳ್ತಂಗಡಿ ಮಂಡಲದ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಜಯಗಳಿಸಲು ಕಾರಣಿಕರ್ಥರಾದ ಕಾರ್ಯಕರ್ತರಿಗೆ, ಮತದಾರ ಬಾಂಧವರಿಗೆ, ನೂತನವಾಗಿ ಚುನಾಯಿತರಾದ ಸದಸ್ಯರುಗಳಿಗೆ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ
ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಜ.31ರಂದು ಯಶಸ್ವಿಯಾಗಿ ಜರುಗಿತು.
ಮುಖ್ಯ ಅಥಿತಿಗಳಾಗಿ ಆಗಮಿಸಿ ತಾಲೂಕಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಈಶ್ವರಪ್ಪ ಭರವಸೆ ನೀಡಿದರು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವ ಆಶ್ವಾಸನೆಯನ್ನು ಸಚಿವರಾದ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು. ಬಂದರು ಮತ್ತು ಮೀನುಗಾರಿಕಾ ಸಚಿವರಾದ ಎಸ್ ಅಂಗಾರ ಸಭೆ ಯನ್ನು ಉದ್ದೇಶಿಸಿ ಮಾತನಾಡಿದರು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಾವು ಯಾರ ಜೊತೆ ಯೂ ತಾಂಡುವುದಿಲ್ಲ ,ನಾವು ರಾಷ್ಟ್ರಸ್ಕೋಸ್ಕರ ತಾಂಟುವವರು,
ಗೋಹತ್ಯೆಮಾಡುವವರ ವಿರುದ್ಧ, ದೇಶ ವಿರೋಧಿಗಳ ವಿರುದ್ಧ, ಭಯೋತ್ಪಾದನೆ ಮಾಡುವವರನ್ನು ಹತ್ತಿಕ್ಕವ ಕೆಲಸ ಮಾಡುತ್ತೇವೆ ಎಂದು ಷೋಷಿಸಿದರು.
ಭಾಜಪ ದ.ಕ ಜಿಲ್ಲಾ ಅಧ್ಯಕ್ಷ ಸುದಶ೯ನ್ ಮೂಡಬಿದ್ರೆ,
ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರಭಾರ ಹರಿಕೃಷ್ಣ ಬಂಟ್ವಾಳ, ದ.ಕ ಜಿ.ಪಂ.ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಮಂಗಳೂರು ಪ್ರಭಾರ ಉದಯ ಶೆಟ್ಟಿ, ರಾಜೇಶ್ ಕಾವೇರಿ, ಜಿ.ಪಂ ಉಪಾಧ್ಯಕ್ಷ ಕಸ್ತೂರಿ ಪಂಜ, ಜಿ ಪಂ, ನ.ಪಂ, ಸದಸ್ಯರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ವಹಿಸಿ, ಸ್ವಾಗತಿಸಿದರು.
ಶ್ರೀ ನಿವಾಸ ರಾವ್
ವಂದೇ ಮಾತರಂ ಹಾಡಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿ, ಸೀತಾರಾಮ್ ಬಿ.ಎಸ್ ವಂದಿಸಿದರು.