ತಾಲೂಕು ಸುದ್ದಿರಾಜ್ಯ ವಾರ್ತೆ

19ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ “ಕುಡಿತದ ಕೆಡುಕು” ಎಂಬ ವಿಷಯದ ಕುರಿತು 19ನೆಯ ರಾಜ್ಯಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಸಂಯೋಜಿಸಲಾಗಿದೆ.
20×14 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್, ಸ್ಪರ್ಧಾ ಕಾರ್ಡ್ ಅಥವಾ ಅಂಚೆ ಕಾರ್ಡ್ ಮೂಲಕ ಚಿತ್ರ ಬಿಡಿಸಬಹುದು. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಪ್ರಾಥಮಿಕ ಶಾಲಾ ವಿಭಾಗ, ಪ್ರೌಢ ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
ಪ್ರತೀ ವಿಭಾಗದಲ್ಲಿ ಪ್ರಥಮ, ದ್ವೀತಿಯ, ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಪೆನ್ಸಿಲ್, ಜಲವರ್ಣ, ತೈಲವರ್ಣ ಅಥವಾ ಇಂಡಿಯನ್ ಇಂಕ್ ಹಾಗೂ ವಿವಿಧ ರೀತಿಯಿಂದ ಚಿತ್ರಗಳನ್ನು ರಚಿಸಬಹುದಾಗಿದೆ. ಒಬ್ಬರು ಎಷ್ಟು ಚಿತ್ರಗಳನ್ನು ಬೇಕಾದರೂ ಕಳುಹಿಸಬಹುದು. ವಿದ್ಯಾರ್ಥಿಗಳಾಗಿದ್ದಲ್ಲಿ ತಮ್ಮ ಮನೆ ವಿಳಾಸ (ದೂರವಾನಿ ಸಂಖ್ಯೆ ಸಹಿತ) ವಿದ್ಯಾಲಯದ ಮುದ್ರೆ ಹಾಗೂ ಶಾಲಾ ಕಾಲೇಜಿನ ಮುಖ್ಯಸ್ಥರ ಸಹಿಯೊಂದಿಗೆ ದೃಢೀಕರಿಸಿ ಕಳುಹಿಸಬೇಕು. ಶಾಲಾ ಮುಖ್ಯಸ್ಥರ ಸಹಿಯಿಲ್ಲದಿದ್ದಲ್ಲಿ ಅಂತಹ ಚಿತ್ರಗಳನ್ನು ಸಾರ್ವಜನಿಕ ವಿಭಾಗ ಎಂದು ಪರಿಗಣಿಸಲಾಗುವುದು. ಸಾರ್ವಜನಿಕ ವಿಭಾಗದವರು ಕೇವಲ ಸಾರ್ವಜನಿಕ ವಿಭಾಗ ಎಂದು ಬರೆದು ಸ್ಪರ್ಧಿಯ ಪೂರ್ಣ ವಿಳಾಸ (ದೂರವಾಣಿ ಸಂಖ್ಯೆ ಸಹಿತ) ಕಳುಹಿಸಬೇಕು.
ಸ್ಪರ್ಧಿಗಳು ತಮ್ಮ ಚಿತ್ರಗಳನ್ನು ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ 2022 ಮಾ.31ರ ಒಳಗಾಗಿ ನಿರ್ದೇಶಕರು ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ -574216 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಯೋಜನೆಯ ನಿರ್ದೇಶಕ ಡಾ. ಐ ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ