ಬೆಳ್ತಂಗಡಿ: ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಸಚಿವ ಆರ್ ಅಶೋಕ್ ರವರಿಗೆ ಅಭಿನಂದನಾ ಕಾರ್ಯಕ್ರಮ ಇಂದು (ಎ.9) ಬೆಳ್ತಂಗಡಿ ಶ್ರೀ ಧರ್ಮಸ್ಥಳ
ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ರಾಜ್ಯ ಕಂದಾಯ ಸಚಿಚ ಆರ್ ಅಶೋಕ್ ಉದ್ಘಾಟಿಸಿ, ರಾಜ್ಯದ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಜಾಗದ ಕನ್ವಷ೯ನ್ ಗಾಗಿ ಜನರು ವಷ೯ಗಟ್ಟಲೆ ಕಛೇರಿಗಳಿಗೆ ಅಲೆದಾಟ ನಡೆಸುತ್ತಿದ್ದಾರೆ. ಈ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ 15 ದಿನಗಳ ಒಳಗೆ ವನ್ ಡೇ ಕನ್ವಷ೯ನ್ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
…ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸಹಾಯಕ ಆಯುಕ್ತ ಡಾ. ಯತೀಶ್ ಉಲ್ಲಾಳ್, ತಹಶೀಲ್ದಾರ್ ಮಹೇಶ್ ಜೆ, ಜಿ.ಪಂ ಸದಸ್ಯರುಗಳಾದ ಕೊರಗಪ್ಪ ನಾಯ್ಕ,ಮಮತಾ ಎಂ ಶೆಟ್ಟಿ, ಸೌಮ್ಯಲತಾ ಜಯಂತ್, ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ನ.ಪಂ. ಉಪಾಧ್ಯಕ್ಷ ಜಯಾನಂದ ಗೌಡ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್, ಸುಧೀರ್, ಸುಶೀಲಾ, ವಸಂತಿ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಬಿಜೆಪಿ ಮಂಡಲ ಉಪಾದ್ಯಕ್ಷ ಸೀತಾರಾಮ ಬಿ.ಎಸ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು,
ಬಿಜೆಪಿ ಮುಖಂಡರು, ಗ್ರಾ.ಪಂ. ಸದಸ್ಯರುಗಳು, ಬಿಜೆಪಿ ಬೂತ್ ಸಮಿತಿ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಲೂಕು ಕಚೇರಿಗೆ ಭೇಟಿ: ಬಳಿಕ ಸಚಿವರು ತಾಲೂಕು ಕಚೇರಿಗೆ ಹೋಗಿ ಅಲ್ಲಿ ಜನರ ಕುಂದು ಕೊರತೆಗಳ ಬಗ್ಗೆ ವಿಚಾರಿಸಿ ಅಹವಾಲು ಸ್ವೀಕರಿಸಿದರು.