ತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್‌ರವರ 130ನೇ ಜನ್ಮದಿನಾಚರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆಯನ್ನು ಎ.14ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಆಚರಿಸಲಾಯಿತು.


ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ, ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಬಿ.ವಿ ವಸಂತ ಕುಮಾರ್ ಭಾಗವಹಿಸಿದ್ದರು. ವಿಧಾನ ಪರಿಷತ್ ಶಾಸಕ ಕೆ ಪ್ರತಾಪ ಸಿಂಹ ನಾಯಕ್, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯ ಜ್ಯೋತಿ, ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಸೌಮ್ಯಲತಾ ಜಯಂತ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷೆ

ತುಳಸಿ ಕರುಣಾಕರ್, ತಾ.ಪಂ ಸದಸ್ಯರಾದ ವಸಂತಿ, ಸುಧೀರ್, ಜಯರಾಮ ಕೃಷ್ಣಯ್ಯ ಆಚಾರ್, ಧನಲಕ್ಷ್ಮೀ, ಅಮಿತಾ, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಜಯಂತ ಕೋಟ್ಯಾನ್, ಗೋಪಾಲಕೃಷ್ಣ, ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ನ.ಪಂ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ್ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಮಹೇಶ್ ಜೆ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ನಿಮ್ಮದೊಂದು ಉತ್ತರ