ತಾಲೂಕು ಸುದ್ದಿ

ಮೇಲಂತಬೆಟ್ಟು ಶ್ರೀದೇವಿ ಭಗವತಿ ಅಮ್ಮನವರ ದೇವಸ್ಥಾನ: ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವ-ಅಗ್ನಿಗುಳಿಗ ದೈವಕ್ಕೆ ಕೋಲ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮನವರ ದೇವಸ್ಥಾನದದಲ್ಲಿ 13ನೇ ವರ್ಷದ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಅಗ್ನಿಗುಳಿಗ ದೈವದ ನರ್ತನ ಸೇವೆ, ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಎ.17 ರಂದು ಕೋವಿಡ್-19ರ ನಿಯಮವನ್ನು ಪಾಲಿಸಿ ಸರಳವಾಗಿ ಜರುಗಿತು.

ಬೆಳಗ್ಗೆ ಶ್ರೀ ದೇವಿ ಸನ್ನಿಧಿಯಲ್ಲಿ ಬ್ರಹ್ಮಶ್ರೀ ನಡ್ವಂತಾಡಿ ವೇದಮೂರ್ತಿ ಶ್ರೀಪಾದ ತಂತ್ರಿ ಇವರ ವೈದಿಕ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತು. ಬೆಳಗ್ಗೆ 7.30 ರಿಂದ ಆಚಾರ್ಯವರಣ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ಗಣಪತಿ ಹೋಮ, ಕಲಶ ಪೂಜೆ, ನವಕ ಕಲಶಾಭಿಷೇಕ, ದೇ ವಿಗೆ ಪಂಚಾಮೃತ ಅಭಿಷೇಕ ನಡೆಯಿತು.

ಬೆಳಗ್ಗೆ 9ಕ್ಕೆ ಗುರು ಪೂಜೆ, ಮಧ್ಯಾಹ್ನ ಗಂಟೆ 12.30 ಕ್ಕೆ ಶ್ರೀ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನ ಸಂತಪ೯ಮೆ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು. ಇವರನ್ನು ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತಸರ ಯೋಗೀಶ್ ಪೂಜಾರಿ ಹಾಗೂ ಪೂಜಾ ಸಮಿತಿಯವರು ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಗೌರವಿಸಿದರು.

ಬಳಿಕ  ಅನ್ನಸಂತರ್ಪಣೆ ನಡೆಯಿತು. ಸಂಜೆ ಗಂಟೆ 5.30 ರಿಂದ ಶ್ರೀ ದೇವಿ ಭಗವತೀ ಅಮ್ಮ ಭಜನಾ ಮಂಡಳಿ, ಮೇಲಂತಬೆಟ್ಟು ಹಾಗೂ ಭಕ್ತರಿಂದ ಭಜನಾ ಕಾರ್ಯಕ್ರಮ. ರಾತ್ರಿ ಗಂಟೆ 7ಕ್ಕೆ ಶ್ರೀ ದೇವಿಗೆ ಮಹಾ ರಂಗಪೂಜೆ, ಮಹಾಪೂಜೆ ಜರುಗಿತು. ರಾತ್ರಿ ಗಂಟೆ 8.35 ರಿಂದ ಅಗ್ನಿಗುಳಿಗ ದೈವಕ್ಕೆ “ಸಿರಿ ಸಿಂಗಾರದ ಕೋಲ” ವೈಭವಪೂರ್ಣವಾಗಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮೇಲಂತಬೆಟ್ಟು ಇವರು ಸಹಕಾರ ನೀಡಿದರು.

ದೇವಸ್ಥಾನದ ಆಡಳಿತ ಮೊಕ್ತಸರ ಯೋಗೀಶ್ ಪೂಜಾರಿ, ಪ್ರಧಾನ ಅರ್ಚಕ ಯಶವಂತ ಶಾಂತಿ, ಪೂಜಾ ಹಾಗೂ ಭಜನಾ ಸಮಿತಿಯವರು, ಊರ ಹಾಗೂ ಪರವೂರ ಭಕ್ತರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ನಿಮ್ಮದೊಂದು ಉತ್ತರ