ಬೆಳ್ತಂಗಡಿ: ಗ್ರಾ.ಪಂ ಚುನಾವಣೆಯ ಮತ ಎಣಿಕೆ ಕೇಂದ್ರವಾಗಿದ್ದ ಉಜಿರೆ ಎಸ್ಡಿಎಂ ಪ.ಪೂ ಕಾಲೇಜು ಬಳಿ ವಿಜಯೋತ್ಸವ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಎ.22ರಂದು
ಶರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆ ಗೊಳಿಸಿದೆ.
ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿಗಳಾದ
ದಾವೂದ್ ಗುರುವಾಯನಕೆರೆ,
ಇಸಾಕ್ ಸುನ್ನತ್ ಕೆರೆ ಮತ್ತು ಹರ್ಷದ್ ಸುನ್ನತ್ ಕೆರೆ ಎಂಬವರೇ ಬಿಡುಗಡೆಗೊಂಡವರು.
ಕಳೆದ ಡಿಸೆಂಬರ್ 31 ರಂದು ಉಜಿರೆಯ ಮತ ಎಣಿಕೆ ಕೇಂದ್ರದ ಬಳಿ ಎಸ್ಡಿಪಿಐ ಪಕ್ಷದ ಪರ ಅಭ್ಯರ್ಥಿಗಳು ಜಯಗಳಿಸಿದ ವೇಳೆ ಆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಭಾರೀ ವಿಜಯೋತ್ಸವ , ಸಂಭ್ರಮಾಚರಣೆ ಕೈಗೊಂಡಿದ್ದರು. ಈ ವೇಳೆ ಪಾಕಿಸ್ತಾನ
ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಆರೋಪದಲ್ಲಿ ಸ್ವಯಂಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರನ್ನು ಬಂಧಿಸಿದ್ದರು.ಅವರ ವಿರುದ್ಧ ದೇಶದ್ರೋಹ ಪ್ರಕರಣವನ್ನೂ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.