ಬೆಳ್ತಂಗಡಿ: ಗೃಹ ರಕ್ಷಕ ದಳದ ಸಿಬ್ಬಂದಿಗಳು ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದ್ದು ಗೃಹ ರಕ್ಷಕ ದಳದ ಸಿಬ್ಬಂದಿಗಳ ಕರ್ತವ್ಯ ಭತ್ಯೆಯಾಗಿ ಕೇವಲ ರೂ.380 ಪಡೆಯುತ್ತಿದ್ದು ಲಾಕ್ಡೌನ್ ಕಾರಣದಿಂದಾಗಿ ಕರ್ತವ್ಯ ನಿರತ ಸಿಬ್ಬಂದಿಗಳು ಸಂಕಷ್ಟದಲ್ಲಿದ್ದು,ಆದ್ದರಿಂದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ನೀಡುತ್ತಿರುವ ಕರ್ತವ್ಯ ಭತ್ಯೆ ರೂ.380 ರಿಂದ 750ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕಾಗಿ ರಾಜ್ಯದ ಮು ಖ್ಯಮಂತ್ರಿಗಳಾದ ಬಿ ಎಸ್ ಯಡ್ಡಿಯೂರಪ್ಪ ನವರಿಗೆ ಜೂ.9 ರಂದು ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದರು.